Home Advertisement
Home ಅಪರಾಧ ವಿದ್ಯಾರ್ಥಿನಿ ನೇಣಿಗೆ ಶರಣು

ವಿದ್ಯಾರ್ಥಿನಿ ನೇಣಿಗೆ ಶರಣು

0
125
ಆತ್ಮಹತ್ಯೆ

ಹುಮನಾಬಾದ(ಬೀದರ್ ಜಿಲ್ಲೆ) : ಓದಿನ ಹೊರೆ ತಾಳಲಾರದೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.
ಐಶ್ವರ್ಯ ರಮೇಶ ಗಜರೆ(೨೧) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದುಬಂದಿದೆ. ಮನೆಯಲ್ಲಿ ಯಾರೂ ಇಲ್ಲದಿರುವುದು ಗಮನಿಸಿ, ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.