ಕನ್ನಡ ನಾಮಫಲಕ ಅಳವಡಿಕೆಗೆ ನೀಡಿದ್ದ ಗಡುವು ವಿಸ್ತರಣೆ

Advertisement

ಬೆಂಗಳೂರು: ಕನ್ನಡ ನಾಮಫಲಕಗಳ ಅಳವಡಿಕೆಗೆ 2 ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ. ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ ಎಂದಿದ್ದಾರೆ.