ಕರ್ತವ್ಯನಿರತ ಚುನಾವಣಾ ಅಧಿಕಾರಿ ಹೃದಯಾಘಾತದಿಂದ ಸಾವು

Advertisement

ರಾಯಚೂರು: ಕರ್ತವ್ಯನಿರತ ಚುನಾವಣಾ ಅಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಜಾಗೀರಜಾಡಲದಿನ್ನಿ‌ ಗ್ರಾಮದ ಮತಗಟ್ಟೆಯಲ್ಲಿ ನಡೆದಿದೆ.
ಮುಖ್ಯೋಪಾಧ್ಯಾಯರಾಗಿದ್ದ ಬಸವರಾಜ್(56) ಮೃತಪಟ್ಟವರೆಂದು ಗುರುತಿಸಲಾಗಿದೆ. ಬಿಎಲ್​ಒ ಕರ್ತವ್ಯಕ್ಕೆ ಬಸವರಾಜ್‌ ಅವರನ್ನು ನಿಯೋಜಿಸಲಾಗಿತ್ತು. ಏಲ್ಲ ಸಿಬ್ಬಂದಿಯಂತೆ ಕಾರ್ಯನಿರ್ವಹಿಸುತ್ತಿದ್ದ ಅವರು, ಏಕಾಏಕಿ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.