ಕಾಗಿನೆಲೆ ಗುರುಪೀಠಕ್ಕೆ ನಡ್ಡಾ-ಬೊಮ್ಮಾಯಿ ಭೇಟಿ

Advertisement

ಹಾವೇರಿ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಮಂಗಳವಾರ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಕಾಗಿನೆಲೆ ಕನಕ ಗುರುಪೀಠಕ್ಕೆ ತೆರಳಿ ಪೀಠಾಧ್ಯಕ್ಷರಾದ ನಿರಂಜನಾನಂದಪುರಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಕಾಗಿನೆಲೆ ಹೆಲಿಪ್ಯಾಡ್‌ನಿಂದ ನೇರವಾಗಿ ಕನಕಗುರುಪೀಠಕ್ಕೆ ಬಂದ ಅವರು ಕೆಲಕಾಲ ಶ್ರೀಗಳೊಂದಿಗೆ ಕುಶಲೋಪರಿ ವಿಚಾರಿಸಿ, ರಾಜಕೀಯ, ಧಾರ್ಮಿಕ ವಿಚಾರಗಳ ಕುರಿತು ಚರ್ಚಿಸಿದರು. ಬಳಿಕ ಶ್ರೀಗಳು ಜೆ.ಪಿ. ನಡ್ಡಾ ಹಾಗೂ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಕಂಬಳಿ ಹೊದಿಸಿ ಸನ್ಮಾನಿಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಬಿ.ಸಿ. ಪಾಟೀಲ್ ಇತರರಿದ್ದರು.