ಕೋಲಾರ ಪ್ರಕರಣ: ಪ್ರಾಂಶುಪಾಲ, ವಾರ್ಡನ್, ಶಿಕ್ಷಕ ಅಮಾನತು

Advertisement

ಕೋಲಾರ: ಕೋಲಾರದ ಮಾಲೂರು ತಾಲೂಕಿನ ಮೊರಾರ್ಜಿ ಶಾಲೆಯಲ್ಲಿ ಮಕ್ಕಳಿಂದ ಮಲದ ಗುಂಡಿಯನ್ನು ಸ್ವಚ್ಛಗೊಳಿಸಿದ ಪ್ರಕರಣದಲ್ಲಿ ಸದರಿ ಶಾಲೆಯ ಪ್ರಾಂಶುಪಾಲರು ಮತ್ತು ವಾರ್ಡನ್ ಇವರನ್ನು ಅಮಾನತುಗೊಳಿಸಲಾಗಿರುತ್ತದೆ ಹಾಗೂ ಈ ರೀತಿಯ ಘಟನೆಗಳು ಜರುಗದಂತೆ ಮುಂದೆ ಎಚ್ಚರಿಕೆ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ‌.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜ್, ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.