ಮೈಸೂರು: ಚಾಮುಂಡಿ ಬೆಟ್ಟಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಕುಟುಂಬ ಸಮೇತ ಚಾಮುಂಡಿ ತಾಯಿ ದರ್ಶನ ಪಡೆzದು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.
ದು:ಖವನ್ನ ದೂರು ಮಾಡುವ ಶಕ್ತಿ ದೇವಿ ಚಾಮುಂಡಿಗೆ ಇದೆ. ಈ ಭಾರಿ ಇಡೀ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿದೆ. ಎಲ್ಲರಿಗೂ ಒಳ್ಳೆಯದನ್ನ ಮಾಡಲೆಂದು ಪ್ರಾರ್ಥನೆ ಮಾಡಿದ್ದೇನೆ, ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತೆ ಎಂಬ ನಂಬಿಕೆ ಇದೆ. ಪ್ರಯತ್ನ ವಿಫಲವಾದ್ರು ಪ್ರಾರ್ಥನೆ ವಿಫಲವಾಗುವುದಿಲ್ಲ ಇಡೀ ರಾಜ್ಯಕ್ಕೆ ಏನೇ ಕೆಲಸ ಮಾಡಬೇಕಾದ್ರು ತಾಯಿಗೆ ಪೂಜೆ ಸಲ್ಲಿಸಿ ಮಾಡುತ್ತೇವೆ. ಇಂದು ಕುಟುಂಬ ಸಮೇತ ಪೂಜೆ ತಾಯಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು. ನನಗೆ ಏನು ಬೇಕು ಅದನ್ನ ಪ್ರಾರ್ಥನೆ ಮಾಡಿದ್ದೇನೆ. ಯಾವ ಚರ್ಚೆನು ಬೇಡ ಈಗ. ಸಿಎಂ ರೇಸ್ ನಿಂದ ಡಿ.ಕೆ ಶಿವಕುಮಾರ್ ಹೊರಬಿದ್ರ ಎಂಬ ಪ್ರಶ್ನೆಗೆ ಮಾರ್ಮಿಕ ಉತ್ತರ ನೀಡಿದ ಡಿಸಿಎಂ. ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರು ಹಾಗೂ ಹಿರಿಯರು. ಅವರು ಬುದ್ಧಿವಾದ ಹೇಳಿ ಸಂದೇಶ ಕೊಟ್ಟಿದ್ದಾರೆ. ಎಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೊಣಾ ಎಂದಷ್ಟೇ ಹೇಳಿ ನಿರ್ಗಮಿಸಿದರು.