ಪ್ರತಾಪ್​ ಸಿಂಹರಿಗೆ ಈಗ ಯಾಕೆ ಮುಸ್ಲಿಮರ ಮೇಲೆ ಪ್ರೀತಿ

Advertisement

ರಾಮನಗರ: ಬಿಜೆಪಿ ಮತ್ತು ‌ಪ್ರತಾಪ್ ಸಿಂಹರದ್ದು ಒಡೆದು ಆಳುವ ಸಂಸ್ಕೃತಿ ಎಂದು ಕಾಂಗ್ರೆಸ್​​​ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.
ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್​ ಸಿಂಹ ಟೀಕೆ ವಿಚಾರಕ್ಕೆ ತಿರುಗೇಟು ನೀಡಿದ ಅವರು, ಸಂಸದ ಪ್ರತಾಪ್​ ಸಿಂಹ ಮುಸ್ಲಿಮರನ್ನು ವಿರೋಧ ಮಾಡುತ್ತಿದ್ದರು. ಈಗ ಯಾಕೆ ಮುಸ್ಲಿಮರ ಮೇಲೆ ಪ್ರೀತಿ ಎಂದು ಪ್ರಶ್ನಿಸಿದರು.
ಕಾಂಗ್ರೆಸ್​ನಲ್ಲಿ ಒಡೆದು ಆಳುವ ಸಂಸ್ಕೃತಿ ಇಲ್ಲ. ಕಾಂಗ್ರೆಸ್ ಪಕ್ಷ​ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತೆ. ಏನು ಗ್ಯಾರಂಟಿ ಕೊಟ್ಟಿದ್ದೆವೇ ಅದನ್ನ ಅನುಷ್ಠಾನ ಮಾಡುತ್ತೇವೆ ಎಂದರು.