ಬಬಲೇಶ್ವರ ಬಳಿ ಭೀಕರ ರಸ್ತೆ ಅಪಘಾತ: ನಾಲ್ವರ ದಾರುಣ ಸಾವು

Advertisement

ವಿಜಯಪುರ : ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಕಾರು ಹಾಗೂ ಸಿಮೆಂಟ್ ಲಾರಿ ಮಧ್ಯ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ವಿಜಯಪುರದಿಂದ ಜಮಖಂಡಿಯ ದೇವಸ್ಥಾನಕ್ಕೆ KA-28, D1021 ನಂಬರಿನ ಕಾರು ಹಾಗೂ ಜಮಖಂಡಿಯಿಂದ ಸಿಮೆಂಟ್ ತುಂಬಿಕೊಂಡು ವಿಜಯಪುರದ ಕಡೆಗೆ ಹೊರಟಿದ್ದ KA-16, B6472 ನಂಬರಿನ ಲಾರಿ ನಡುವೆ ಅಪಘಾತವಾಗಿ ಕಾರಿನಲ್ಲಿದ್ದ ನಾಲ್ಕು ಜನ ದಾರುಣ ಸಾವಿಗಿಡಾಗಿದ್ದಾರೆ.

ಮೃತರನ್ನು ವಿಜಯಪುರ ಮೂಲದ ಅರ್ಜುನ ಕುಶಾಲಸಿಂಗ್ ರಜಪೂತ (32) ರವಿನಾಥ ಸುನಿಲಾಲ್ ಪತ್ತಾರ ( 52 ) ಪುಷ್ಟಾ ರವಿನಾಥ ಪತ್ತಾರ ( 40) ಮೇಘರಾಜ ಅರ್ಜುನಸಿಂಗ್ ರಜಪೂತ (12) ಎಂದು ಗುರುತಿಸಲಾಗಿದೆ.

ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ವಿಜಯಪುರ ಎಸ್ಪಿ ಋಷಿಕೇಶ ಸೋನಾವನೆ ಹಾಗೂ ಇತರೇ ಅಧಿಕಾರಿಗಳು ಭೇಟಿ ನೀಡಿದ್ದಾರೆ.