ಬೆಂಗಳೂರು: ಕನಕಪುರ ತಾಲ್ಲೂಕಿನಿಂದ ಬಮೂಲ್ ಚುನಾವಣೆಗೆ ಡಿ. ಕೆ. ಸುರೇಶ್ ಸ್ಪರ್ಧೆ ಮಾಡಲಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಡಿ. ಕೆ. ಸುರೇಶ್ ಪೋಸ್ಟ್ ಮಾಡಿದ್ದು ಕನಕಪುರ ತಾಲ್ಲೂಕಿನ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರುಗಳು ಹಾಗೂ ಇತರೆ ಸದಸ್ಯರುಗಳ ಒತ್ತಡ ಹಾಗೂ ಸಲಹೆ ಮೇರೆಗೆ ಕನಕಪುರ ತಾಲ್ಲೂಕಿನಿಂದ ಬಮೂಲ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಅಭ್ಯರ್ಥಿಯಾಗಿ ಇಂದು ಉಮೇದುವಾರಿಕೆಯನ್ನು ಸಲ್ಲಿಸುತ್ತಿದ್ದೇನೆ. ನಿಮ್ಮ ಸಹಕಾರ ಹಾಗೂ ಆಶೀರ್ವಾದ ಸದಾ ಇರಲಿ ಎಂದಿದ್ದಾರೆ.