ಬಳ್ಳಾರಿ: ಜಿಲ್ಲೆಯ ಹೊಸ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿ ಡಾ. ಶೋಭಾರಾಣಿ ವಿ.ಜೆ. ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಮೆಟ್ರೋಪಾಲಿಟನ್ ಕಾರ್ಯಪಡೆಯ ಎಸ್ಪಿ ಆಗಿದ್ದ ಆಗಿ ಶೋಭಾ ರಾಣಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ. ಇಲ್ಲಿದ್ದ ರಂಜಿತ್ ಕುಮಾರ್ ಅವರನ್ನು ಯಾವುದೇ ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಲಾಗಿದೆ.