ಬಾಣಂತಿ, ಮಗು ಸಾವು: ಪ್ರತಿಭಟನೆ

Advertisement

ಕುಷ್ಟಗಿ: ಹೆರಿಗೆಗಾಗಿ ಆಸ್ಪತ್ರೆಗೆ ಬಂದಿದ್ದ ಗರ್ಭಿಣಿ ಮೃತಪಟ್ಟ ಘಟನೆ ಜಿಲ್ಲೆಯ ತಾಲೂಕಿನ ತಾವರಗೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ವೈದ್ಯಾಧಿಕಾರಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಸ್ಪತ್ರೆ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ವೈದ್ಯಾಧಿಕಾರಿ ಡಾ. ಕಾವೇರಿ ಶಾವಿ, ಹೆರಿಗೆ ಸಂದರ್ಭದಲ್ಲಿ ಗರ್ಭಿಣಿಯನ್ನು ನಿರ್ಲಕ್ಷ್ಯ ಮಾಡಿದ್ದು, ಮಗು ಸಮೇತ ಮಹಿಳೆ ಮೃತಪಟ್ಟಿದ್ದಾರೆ. ಆಕ್ರೋಶಗೊಂಡ ಮೃತಪಟ್ಟ ಮಹಿಳೆ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಮಂಗಳವಾರ ರಾತ್ರಿಯಿಂದ ಆಸ್ಪತ್ರೆ ಆವರಣದಲ್ಲಿ ಧರಣಿ ಕುಳಿತು ಗರ್ಭಿಣಿ ಸಾವಿಗೆ ಕಾರಣಳಾದ ಕಾವೇರಿ ಅವರನ್ನು ಕೂಡಲೇ ಕರ್ತವ್ಯದಿಂದ ವಜಾ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.