ಬಿಎಸ್‌ವೈ ನನಗೆ ಎಚ್ಚರಿಕೆ ನೀಡಿದ್ದಾರೆಂಬುದು ಸುಳ್ಳು

ರೇಣುಕಾಚಾರ್ಯ
Advertisement

ದಾವಣಗೆರೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನನಗೆ ಎಚ್ಚರಿಕೆ ನೀಡಿದ್ದಾರೆ. ಇದೇ ಧೋರಣೆ ಮುಂದುರಿಸಿದರೆ ನಿನ್ನ ದಾರಿ ನೋಡಿಕೋ, ಪಕ್ಷ ಬಿಟ್ಟು ಹೋಗು ಎಂದು ಹೇಳಿಲ್ಲ. ಆದರೆ ಕೆಲ ಮಾಧ್ಯಮಗಳಲ್ಲಿ ವರದಿ ಬಂದಿದೆ. ಇದು ಸತ್ಯಕ್ಕೆ ದೂರ. ಇದರ ಹಿಂದೆ ಷಡ್ಯಂತ್ರ ಅಡಗಿದೆ. ನನಗೆ ಯಾವುದೇ ಸೂಚನೆ, ಎಚ್ಚರಿಕೆ ಬಂದಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆ ಕುರಿತಂತೆ ನಮ್ಮ ಅಭಿಪ್ರಾಯಗಳನ್ನು ವರಿಷ್ಠರಿಗೆ ಈಗಲೂ ಹಾಗೂ ಈ ಹಿಂದೆಯೇ ತಿಳಿಸಿದ್ದೇವೆ. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಆದರೆ ಮಾಧ್ಯಮಗಳಲ್ಲಿ ಈ ರೀತಿ ಬಂದಿದೆ. ಈ ರೀತಿಯಾದ ಯಾವುದೇ ಬೆಳವಣಿಗೆ ಆಗಿಲ್ಲ ಎಂದರು.