ಬೆಂಗಳೂರಿನಲ್ಲಿ ಕುಟುಂಬ ಸಮೇತ ಮತ ಚಲಾಯಿಸಿದ ಕುಮಾರಸ್ವಾಮಿ

Advertisement

ಬೆಂಗಳೂರು: ಜೆಡಿಎಸ್ ನಾಯಕ, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್​.ಡಿ. ಕುಮಾರಸ್ವಾಮಿ ಕೇತಗಾನಹಳ್ಳಿ ಕುಟುಂಬ ಸಮೇತವಾಗಿ ಬಂದು ಮತ ಚಲಾಯಿಸಿದರು.
ಮತದಾನ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮತದಾರರಿಗೆ ಆಮಿಷವೊಡ್ಡುವ ಕೆಲಸ ಮಾಡುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೂ ಗಿಫ್ಟ್ ಕಾರ್ಡ್ ಹಂಚುತ್ತಿದ್ದಾರೆ. 4 ಸಾವಿರದಿಂದ 10 ಸಾವಿರದ ಗಿಫ್ಟ್ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ. ದೂರು ಕೊಟ್ಟರೂ ಚುನಾವಣಾ ಆಯೋಗ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು