ಮೀಸಲಾತಿ ವಿರೋಧಿಸಿದವರೇ ಕಾಂಗ್ರೆಸ್‌ನವರು

ರಾಯಚೂರು: ಕಾಂಗ್ರೆಸ್‌ನ ನಾಯಕರಾದ ಜವಾಹರಲಾಲ್ ನೆಹರು ಅವರಿಂದ ರಾಜೀವ್‌ಗಾಂಧಿವರೆಗೂ ಮೀಸಲಾತಿ ವಿರೋಧಿಸಿದವರು. ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದು, ಮೀಸಲಾತಿ ವಿರೋಧ ಮಾಡಿರುವ ಸಂಸತ್‌ನಲ್ಲಿ ರಾಜೀವ್‌ಗಾಂಧಿಯವರು ದೊಡ್ಡ ಭಾಷಣೆವೇ ಇದೆ ಎಂದು ಕೇಂದ್ರದ ಗ್ರಾಹಕರ ವ್ಯವಹಾರಗಳು, ಆಹಾರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ತಿಳಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವರಿಗೆ ಸಾಮಾಜಿಕ ಬದ್ಧತೆಯೇ ಇಲ್ಲ. ನರೇಂದ್ರ ಮೋದಿ ನೇತೃತ್ವದ 11 ವರ್ಷದ ಆಡಳಿತಾವಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶೂನ್ಯ ಅಂಕ ನೀಡಿರುವುದು ತಮ್ಮ ಕುರ್ಚಿ
ಉಳಿಸಿಕೊಳ್ಳಲಲು ಹೇಳುತ್ತಿದ್ದಾರೆ. ರಾಹುಲ್‌ಗಾಂಧಿಯವರಿಗೆ ಜಿರೋ ಅಂಕ ಜನರು ನೀಡಿದ್ದಾರೆ ಎಂದು ಟೀಕಿಸಿದರು. 2014 ರಿಂದ 30-32 ಸಾರಿ ರಾಹುಲ್ ಗಾಂಧಿ ಲಾಂಚಾದರು. ಚಂದ್ರಯಾನ ಒಂದು ಬಾರಿ ವಿಫಲಗೊಂಡು ಮೇಲೆ ಲಾಂಚಿಂಗ್ ಯಶಸ್ವಿಯಾಗಿತು. ಆದರೆ, ರಾಹುಲ್‌ಗಾಂಧಿ ಯಶಸ್ವಿಯಾಗಲಿಲ್ಲ, ಜನರು ಅವರಿಗೆ ಶೂನ್ಯ ಅಂಕ ನೀಡಿದ್ದಾರೆ ಎಂದು ಎಂದು ಹೇಳಿದರು. ಮೂರು ವರ್ಷಗಳ ಕಾಲ ಅಧಿಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ಧರಾಮಯ್ಯನವರು ಬೆಲೆ ಏರಿಕೆಗೆ ನರೇಂದ್ರ ಮೋದಿ ಕಾರಣ ಎಂದು ಹೇಳುತ್ತಿದ್ದಾರೆ. ಆದರೂ ಅವರಿಗೆ ಅದು ತಿಳಿದಿದೆ ಎಂದು ವ್ಯಂಗ್ಯವಾಗಿ ಟೀಕಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದೆ. ಎರಡು ಮೂರು ಬಾರಿ ಬೆಲೆ ಏರಿಕೆ ಮಾಡಿದ್ದಾರೆ. ಅದು ಜಿಎಸ್‌ಟಿ ಅಡಿ ಬರುವುದಿಲ್ಲ. ತೆರಿಗೆ ವಿಧಿಸಿದ್ದಾರೆ. ಗ್ಯಾರಂಟಿ ಯೋಜನೆಗೆ ಸಂಬಂಧಿಸಿದ 48 ವಿವಿಧ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.