ಮೋದಿ ಪ್ರಧಾನ ಸುಳ್ಳುಗಾರ

Advertisement

ರಾಯಚೂರು: ಮೋದಿ ಪ್ರಧಾನ ಮಂತ್ರಿ ಅಲ್ಲ, ಪ್ರಧಾನ ಸುಳ್ಳುಗಾರ 10 ವರ್ಷ ಸುಳ್ಳುಗಳನ್ನು ಹೇಳುತ್ತಾ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
ರಾಯಚೂರಿನಲ್ಲಿ ಮಾತನಾಡಿದ ಅವರು, ಮೋದಿ ಈ ಹಿಂದೆಯೂ ಅಚ್ಛೇ ದಿನ್ ಅಂತಾ ಹೇಳಿದ್ದರು. ಯುವಕರಿಗೆ ಸ್ಕಿಲ್ ಇಂಡಿಯಾ ಎಂದು ಹೇಳಿದರು. ಮೇಕ್ ಇನ್ ಇಂಡಿಯಾ ಅಂತಾ ಮಾಡಿದರು. ಆತ್ಮನಿರ್ಭರ್ ಅಂತಾ ಹೇಳಿದ್ರೂ ಏನೂ ಉಪಯೋಗ ಆಗಿಲ್ಲ. ಫಾರ್ಮರ್ ಹಬ್, ಹಾರ್ಟಿಕಲ್ಚರ್ ಹಬ್ ಮಾಡುತ್ತೇವೆ ಎಂದಿದ್ದರು. ಅವರ ಪ್ರಣಾಳಿಕೆಯಲ್ಲಿ ಅಮೃತ್ ಕಾಲ್ ಎಂದು ಹೇಳಿದ್ದಾರೆ. ಆದರೆ ಇದು ಅಮೃತ ಕಾಲ ಅಲ್ಲ, ಇದು ಅನ್ಯಾಯದ ಕಾಲ ಎಂದು ಹರಿಹಾಯ್ದರು.