ಯಾದಗಿರಿ: ಕೋಮು ಭಾವನೆಗೆ ಧಕ್ಕೆ ತರುವ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಕಿರಾತಕ ಯುವಕರಿಬ್ಬರನ್ನು ಬಂಧಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದಾರೆ, ಅಶ್ವಿನಿ ಶ್ರೀವತ್ಸ್ ಮಾಡಿರುವ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಅವರು ಈ ಸಂಬಂಧ ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ & ತನಿಖೆ ಪ್ರಗತಿಯಲ್ಲಿದೆ ಎಂದಿದ್ದಾರೆ.