ಯೋಧರ ಕಲ್ಯಾಣಕ್ಕೆ ನಿಗಮ ಸ್ಥಾಪಿಸಲು ಚಿಂತನೆ

ಬೆಂಗಳೂರು: ಮಾಜಿ ಯೋಧರ ಕಲ್ಯಾಣಕ್ಕಾಗಿ ಒಂದು ನಿಗಮ ಸ್ಥಾಪಿಸುವ ಬಗ್ಗೆ ಚಿಂತಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ಅವರು ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಗೌರವಿಸಿ ಮಾತನಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಟೌನ್ ಹಾಲ್‌ನಲ್ಲಿ ಆಯೋಜಿಸಿದ್ದ ‘ಜೈ ಹಿಂದ್ ಸಭಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವೀರ ಯೋಧರಿಗೆ ಕೃತಜ್ಞತೆ, ನಿವೃತ್ತ ಯೋಧರು ಮತ್ತು ಹುತಾತ್ಮ ಯೋಧರ ಕುಟುಂಬಕ್ಕೆ ಗೌರವ ಸಲ್ಲಿಸಿದೆ. ನೂರಾರು ಮಾಜಿ ಯೋಧರು ಮತ್ತು ಹುತಾತ್ಮರ ಕುಟುಂಬಗಳೊಂದಿಗೆ ಈ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳಲು ಅವಕಾಶ ಸಿಕ್ಕಿದ್ದು ನನ್ನ ಸುದೈವ. ಕಾಂಗ್ರೆಸ್ ಪಕ್ಷವು ಯಾವಾಗಲೂ ದೇಶ ಮತ್ತು ಸಶಸ್ತ್ರ ಪಡೆಗಳ ಜೊತೆ ನಿಲ್ಲುತ್ತದೆ. ಅದಕ್ಕಾಗಿಯೇ ಕಾಂಗ್ರೆಸ್‌ ಶಕ್ತಿ ಈ ದೇಶದ ಶಕ್ತಿ ಎಂದು ನಾನು ಹೇಳುತ್ತಿರುತ್ತೇನೆ.ಮಾಜಿ ಯೋಧರ ಕಲ್ಯಾಣಕ್ಕಾಗಿ ಒಂದು ನಿಗಮ ಸ್ಥಾಪಿಸುವ ಬಗ್ಗೆ ಚಿಂತಿಸಿದ್ದೇನೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಸಚಿವ ಸಂಪುಟದಲ್ಲಿ ಚರ್ಚಿಸುತ್ತೇವೆ. ಕರ್ನಾಟಕ ಸರ್ಕಾರವು ಮಾಜಿ ಯೋಧರು ಮತ್ತು ಅವರ ಕುಟುಂಬಗಳಿಗೆ ಶಕ್ತಿ ನೀಡಲು ಸದಾ ಸಿದ್ಧವಿದೆ ಎಂದರು.