ರಾಷ್ಟ್ರಗೀತೆ ಹಾಡುವ ವೇಳೆ ಹೃದಯಾಘಾತ: ಎಸೆಸೆಲ್ಸಿ ವಿದ್ಯಾರ್ಥಿನಿ ಮೃತ್ಯು

Advertisement

ಚಾಮರಾಜನಗರ: ರಾಷ್ಟ್ರಗೀತೆ ಹಾಡುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಅಸುನೀಗಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟ್‌ನಲ್ಲಿ ರಾಷ್ಟ್ರಗೀತೆ ಹಾಡುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಅಸುನೀಗಿದ್ದಾಳೆ. ಪೆಲಿಸಾ ಮೃತ ದುರ್ದೈವಿ ಆಗಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆಗಿದ್ದಳು . ವಿದ್ಯಾರ್ಥಿನಿ ಪೆಲಿಸಾ ಕಾನ್ವೆಂಟ್‌ನಲ್ಲಿ ರಾಷ್ಟ್ರಗೀತೆ ಹಾಡುತ್ತಿದ್ದಾಗ ದಿಢೀರನೇ ಕುಸಿದುಬಿದ್ದಿದ್ದಾಳೆ. ಬಳಿಕ, ಆಸ್ಪತ್ರೆಗೆ ರವಾನಿಸಿತರಾದರೂ ಅಷ್ಟರಲ್ಲಾಗಲೇ ಅಸುನೀಗಿದ್ದಾಳೆ ಎನ್ನುವ ಮಾಹಿತಿ ತಿಳಿದುಬಂದಿದೆ.