ವಿಜಯಪುರ-ಮಂಗಳೂರು ಎಕ್ಸ್‌ಪ್ರೆಸ್ ರೈಲು: ಮಂಗಳೂರು ಸೆಂಟ್ರಲ್ ನಿಲ್ದಾಣದವರೆಗೂ ವಿಸ್ತರಣೆ

Advertisement

ಹುಬ್ಬಳ್ಳಿ: ವಿಜಯಪುರ ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಚಲಿಸುವ ದೈನಂದಿನ ವಿಶೇಷ ಎಕ್ಸ್ ಪ್ರೆಸ್ ರೈಲು( ಸಂಖ್ಯೆ ೦೭೩೭೭/೦೭೩೭೮) ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಮಂಗಳೂರು ಸೆಂಟ್ರಲ್ ನಿಲ್ದಾಣದವರೆಗೆ ವಿಸ್ತರಿಸಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ.
ವಿಜಯಪುರ-ಮಂಗಳೂರು ಜಂಕ್ಷನ್ ಡೈಲಿ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ ೦೭೩೭೭) ಮಂಗಳೂರು ಸೆಂಟ್ರಲ್ ನಿಲ್ದಾಣದವರೆಗೆ ಸಂಚರಿಸಲಿದೆ.
ಮAಗಳೂರು ಜಂಕ್ಷನ್-ವಿಜಯಪುರ ಡೈಲಿ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ ೦೭೩೭೭) ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ.
ಏಪ್ರಿಲ್ ೨೦ ರಿಂದ ರೈಲು (ರೈಲು ಸಂಖ್ಯೆ ೦೭೩೭೭) ವಿಜಯಪುರ ನಿಲ್ದಾಣದಿಂದ ಮಧ್ಯಾಹ್ನ ೩:೩೦ ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ ೯:೫೦ ಗಂಟೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣವನ್ನು ತಲುಪಲಿದೆ.
ಏಪ್ರಿಲ್ ೨೧ ರಿಂದ ರೈಲು (ರೈಲು ಸಂಖ್ಯೆ ೦೭೩೭೮) ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಧ್ಯಾಹ್ನ ೨:೩೫ ಗಂಟೆಗೆ ಹೊರಟು ಮರುದಿನ ಬೆಳಗ್ಗೆ ೯.೩೫ ಕ್ಕೆ ವಿಜಯಪುರ ನಿಲ್ದಾಣಕ್ಕೆ ಆಗಮಿಸಲಿದೆ.
ವಿಜಯಪುರ-ಮಂಗಳೂರು ಜಂಕ್ಷನ್-ವಿಜಯಪುರ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ ೦೭೩೭೭/೦೭೩೭೮ ) ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದ ನಂತರ, ರೈಲುಗಳ ಸಂಖ್ಯೆ ೦೭೩೩೮ ಗುಂತಕಲ್-ಎ?ಎಕ್ಸಪ್ರೆಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ಸ್ಪೆಷಲ್ ಮತ್ತು ರೈಲು ಸಂಖ್ಯೆ ೦೬೪೮೪ ಕಬಕಪುತ್ತೂರು-ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲುಗಳ ವೇಳಾಪಟ್ಟಿಯನ್ನು ಏಪ್ರಿಲ್ ೨೦ ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ ಎಂದು ತಿಳಿಸಲಾಗಿದೆ.
ಈ ರೈಲುಗಳ ಪರಿಷ್ಕೃತ ವೇಳಾಪಟ್ಟಿಗಾಗಿ ದಯವಿಟ್ಟು ಈ ಕೆಳಗಿನ ಲಿಂಕ್ https://swr.indianrailways.gov.in/view_detail.jsp?lang=0&dcd=7356&id=0,4,268 ಮೇಲೆ ಕ್ಲಿಕ್ ಮಾಡಿ ಮಾಹಿತಿ ತಿಳಿದುಕೊಳ್ಳಬಹುದು ಎಂದು ತಿಳಿಸಲಾಗಿದೆ.
ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ೧೩೯ ಗೆ ಸಂಪರ್ಕಿಸಿ ಅಥವಾ ಭಾರತೀಯ ರೈಲ್ವೆ ವೆಬ್ ಸೈಟ್ www.enquiry.indianrail.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.