ವಿಶ್ವ ಗೀತಾ ಪರ್ಯಾಯಕ್ಕೆ ಶುಭ ಹಾರೈಸಿದ ಮೋದಿ

Advertisement

ಉಡುಪಿ: ವಿಶ್ವ ಗೀತಾ ಪರ್ಯಾಯ ಸಂದರ್ಭದಲ್ಲಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ ಮತ್ತು ನಮಸ್ಕಾರಗಳನ್ನು ಅರ್ಪಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿ ನಡೆದ ಸಭೆಯಲ್ಲಿ ಶ್ರೀ ಸುಗುಣೇಂದ್ರ ತೀರ್ಥರ ಶಿಷ್ಯ ತಿರುಪತಿ ವೆಂಕಟೇಶ್ ಅವರು ಪರ್ಯಾಯ ಮಹೋತ್ಸವಕ್ಕೆ ಔಪಚಾರಿಕ ಆಹ್ವಾನ ನೀಡಿರುವುದನ್ನು ಸ್ಮರಿಸಿರುವ ಪ್ರಧಾನಿ ನರೇಂದ್ರ ಮೋದಿ, 2008-2010ರಲ್ಲಿ ನಡೆದ ಪುತ್ತಿಗೆ ಶ್ರೀಪಾದರ 3ನೇ ಪರ್ಯಾಯ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದನ್ನು ನೆನಪಿಸಿಕೊಂಡಿದ್ದಾರೆ. ಶ್ರೀಗಳ ನಾಲ್ಕನೆಯ ಈ ಪರ್ಯಾಯವನ್ನು ‘ವಿಶ್ವಗೀತಾ ಪರ್ಯಾಯ’ ಎಂದು ಕರೆದಿರುವ ಮಹತ್ವವನ್ನು ಶ್ಲಾಘಿಸಿ, ಪರ್ಯಾಯೋತ್ಸವಕ್ಕೆ ಹಾರ್ದಿಕ ಶುಭಾಶಯ ತಿಳಿಸಿದ್ದಾರೆ.