ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, ವಿದ್ಯಾರ್ಥಿ ಗಂಭೀರ

Advertisement

ಚಿಕ್ಕಬಳ್ಳಾಪುರ: ಗೌರಿಬಿದನೂರಿನ ತಾಲೂಕಿನ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪೋಷಕರೊಬ್ಬರು ಕರೆಂಟ್‌ ಶಾಕ್‌ನಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಶಾಲೆಯೊಂದರಲ್ಲಿ ಪೋಷಕರ ಕ್ರೀಡಾಕೂಟ ಆಯೋಜಿಸಲಾಗಿತ್ತು. ಇದಕ್ಕಾಗಿ ಶಾಲಾ ಆವರಣದಲ್ಲಿ ದೊಡ್ಡದಾಗಿ ಪೆಂಡಾಲ್‌ ಹಾಕಲಾಗಿತ್ತು. ಈ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ಪೆಂಡಾಲ್‌ ಹಾರಿ ಹೈಟೆನ್ಷನ್‌ ತಂತಿಗೆ ತಗುಲಿದೆ.ಇದರಿಂದ ಪೆಂಡಲ್ ಕೆಳಗೆ ಇದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯುತ್ ಪಸರಿಸಿದ್ದು, ವಿದ್ಯುತ್ ಅವಘಡದಲ್ಲಿ ಪೋಷಕ ರಾಘವೇಂದ್ರ ಸ್ಥಳದಲ್ಲೇ ಮೃತಪಟ್ಟರೆ, ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗ ದಾಖಲು ಮಾಡಲಾಗಿದೆ.