ಶೆಟ್ಟರಿಗೆ ವೈಯಕ್ತಿಕ ಲಾಭಕ್ಕಷ್ಟೇ ಬಿಜೆಪಿ ಬೇಕಿತ್ತಾ?

Advertisement

ಚಿಕ್ಕಮಗಳೂರು: ಜಗದೀಶ್ ಶೆಟ್ಟರ್ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರಿದ್ದು ದುರದೃಷ್ಟಕರ. ಒಬ್ಬ ವ್ಯಕ್ತಿಗೆ ಒಂದು ಪಕ್ಷ ಏನೆಲ್ಲ ಸ್ಥಾನ ನೀಡಬಹುದು ಅದನ್ನೆಲ್ಲ ಕೊಟ್ಟಿದೆ. ಜಗದೀಶ್ ಶೆಟ್ಟರ್ ಪಕ್ಷ ತೊರೆದು ಯಾವ ಮೆಸೇಜ್ ನೀಡಿದ್ರು. ಸೈದ್ಧಾಂತಿಕವಾಗಿ ಬಿಜೆಪಿ ಜೊತೆ ಶೆಟ್ಟರ್ ಇರ್ಲಿಲ್ವಾ? ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು
ರಾಜ್ಯ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದ ಜಗದೀಶ್ ಶೆಟ್ಟರ್ ಬಿಜೆಪಿಗೆ ಬೈ ಹೇಳಿ ಕಾಂಗ್ರೆಸ್ ಸೇರಿರುವ ಕುರಿತು ಪ್ರತಿಕ್ರಿಯಿಸಿದ ಅವರು, ವೈಯಕ್ತಿಕ ಲಾಭ ನಷ್ಟವನ್ನು ಹಾಕಿ‌ ನನಗೆ ಲಾಭ ಆದ್ರೆ ಮಾತ್ರ ಬಿಜೆಪಿ. ಇನ್ನೊಬ್ಬರಿಗೆ ಆದ್ರೆ ಬಿಜೆಪಿ ಅಲ್ಲ ಎಂಬ ಮನಸ್ಥಿತಿ ಆಶ್ಚರ್ಯ ತರಿಸಿದೆ. ಜಗದೀಶ್ ಶೆಟ್ಟರ್ ಅವರಿಂದ ಇಂತಹದನ್ನ ನಿರೀಕ್ಷೆ ಮಾಡಿರಲಿಲ್ಲ ಎಂದರು.