ಶೆಟ್ಟರ್‌ಗೆ ಧಾರವಾಡ ಟಿಕೆಟ್ ಕೊಟ್ಟರೆ ಒಳ್ಳೆಯದು

Advertisement

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಲೋಕಸಭೆಗೆ ಸ್ಪರ್ಧಿಸುವಂತೆ ಬಹಳಷ್ಟು ಅಭಿಮಾನಿಗಳು, ಸಮಾಜದಿಂದ ಒತ್ತಡವಿದೆ. ಧಾರವಾಡದಿಂದ‌ ಅವರಿಗೆ ಟಿಕೆಟ್ ಕೊಟ್ಟರೆ ಬಹಳಷ್ಟು ಅನುಕೂಲವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು.
ಬುಧವಾರ ನಗರದಲ್ಲಿ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರು ನಾವು ಅಖಂಡ‌ ಧಾರವಾಡದಲ್ಲಿ ಬೆಳೆದವರು. ಹೀಗಾಗಿ ಧಾರವಾಡ ಅಥವಾ ಹಾವೇರಿಯಲ್ಲಿ ಟಿಕೆಟ್ ಕೊಟ್ಟರೆ ಒಳ್ಳೆಯದು ಎಂದರು. ಮಾಜಿ ಸಿಎಂ ಜಗದೀಶ ಶೆಟ್ಟರ್ ಪಕ್ಷಕ್ಕೆ ಮರಳಿದ ಮೇಲೆ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಅಭ್ಯರ್ಥಿ ಯಾರೇ ಆಗಲಿ, ಒಟ್ಟಾಗಿ ಕೆಲಸ ಮಾಡಬೇಕು ಅದು ಆಗುತ್ತಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದರು.