ಶ್ರೀರಾಮನ ಪ್ಲೆಕ್ಸ್​​ ಬ್ಲೇಡ್​​ನಿಂದ ಹರಿದ ದುಷ್ಕರ್ಮಿಗಳು

Advertisement

ಕೋಲಾರ: ಶ್ರೀರಾಮನ ಕಟೌಟ್ ಹಾಗೂ ಫ್ಲೆಕ್ಸ್‌ಗಳಿಗೆ ಬ್ಲೇಡ್‌ನಿಂದ ಹಾನಿಗೊಳಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಗುಣಗಂಟೆಪಾಳ್ಯದಲ್ಲಿ ಘಟನೆ ನಡೆದಿದೆ.
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಹಲವೆಡೆ ಹಾಕಲಾಗಿದ್ದ ಕಟೌಟ್ ಹಾಗೂ ಫ್ಲೆಕ್ಸ್‌ಗಳಿಗೆ ಬ್ಲೇಡ್‌ನಿಂದ ಹಾನಿಗೊಳಿಸಿರುವ ಘಟನೆ ಮಂಗಳವಾರ ತಡರಾತ್ರಿ 10ರ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದೆ. ಕಿಡಿಗೇಡಿಗಳು ಶ್ರೀರಾಮನ ಕಟೌಟ್ ಹಾಗೂ ಫ್ಲೆಕ್ಸ್‌ಗಳಿಗೆ ಬ್ಲೇಡ್ ಹಾಕಿ ಹಾನಿಗೊಳಿಸಿದ್ದಾರೆ. ಕಟೌಟ್‌ಗಳು ಹಾನಿಗೊಂಡಿರುವ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನಲೆಯಲ್ಲಿ ಸ್ಥಳಕ್ಕೆ ಮುಳಬಾಗಿಲು ನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸುತ್ತಿದ್ದಾರೆ. ಸ್ಥಳೀಯ ಯುವಕರು ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.