ಸಂಧಾನಕ್ಕೆ ಬಂದರೂ ಒಪ್ಪದ ರೇಣುಕಾಚಾರ್ಯ

ರೇಣುಕಾಚಾರ್ಯ
Advertisement

ಹೊನ್ನಾಳಿ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಬೆಂಬಲ ನೀಡಬೇಕೆಂದು ಮನವೊಲಿಸಲು ಬಂದಿದ್ದ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಬಳಗಕ್ಕೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಒಪ್ಪದೆ ನಿರಾಕರಿಸಿದ್ದಾರೆ.
ಸೋಮವಾರ ಹೊನ್ನಾಳಿಯಲ್ಲಿರುವ ರೇಣುಕಾಚಾರ್ಯ ಅವರ ನಿವಾಸಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ಭೇಟಿ ನೀಡಿ ಸುದೀರ್ಘ ಚರ್ಚೆ ನಡೆಸಿ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ಅವರು ಸುತರಾಂ ಒಪ್ಪಿಲ್ಲ.
ಸಮಸ್ಯೆಗಳು ಏನೇ ಇದ್ದರೂ ಬಗೆಹರಿಸಿಕೊಳ್ಳೋಣ. ನೀವೆಲ್ಲರೂ ಒಗ್ಗಟ್ಟಾಗಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ರೇಣುಕಾಚಾರ್ಯ, ನಾನು ಯಾವುದೇ ಕಾರಣಕ್ಕೂ ಅಭ್ಯರ್ಥಿ ಆಗುವುದಿಲ್ಲ, ಆದರೆ ಈಗ ಘೋಷಣೆ ಮಾಡಿರುವ ಅಭ್ಯರ್ಥಿ ಬದಲಾಗಬೇಕು ಎಂದು ಹೇಳಿದ್ದೇನೆ. ಅದಲ್ಲದೇ ಈ ವಿಷಯ ನನ್ನ ನಿರ್ಧಾರವಲ್ಲ, ಎಲ್ಲರೂ ತೆಗೆದುಕೊಂಡಿರುವ ನಿರ್ಧಾರ ಎಂದು ಹೇಳಿ ಅವರನ್ನು ಗೌರವದಿಂದ ಕಳುಹಿಸಿಕೊಟ್ಟಿದ್ದಾರೆ.