ಆಹಾರ ಇಲಾಖೆ ವ್ಯವಸ್ಥಾಪಕಿ ಅಮಾನತು

ಅಮಾನತು

ಚಿತ್ರದುರ್ಗ: ನ್ಯಾಯಬೆಲೆ ಅಂಗಡಿಗಳಿಗೆ ಪರವಾನಗಿ ನೀಡುವಾಗ ಸಾಕಷ್ಟು ಅಕ್ರಮಗಳನ್ನು ನಡೆಸಿರುವ ಆರೋಪದ ಮೇಲೆ ಚಿತ್ರದುರ್ಗ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ವ್ಯವಸ್ಥಾಪಕಿ ಶಬೀನಾ ಪರ್ವಿನ್ ಅವರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಇಲಾಖಾ ವಿಚಾರಣಾ ಕಾಯ್ದಿರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.