ಹಕ್ಕು ಚಲಾಯಿಸಲು ಬಂದ ವಿದ್ಯಾರ್ಥಿಗಳು: ಬಿಜೆಪಿ-ಕಾಂಗ್ರೆಸ್ ನಾಯಕರ ವಾಗ್ವಾದ

Advertisement

ಬಾಗಲಕೋಟೆ:ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆದಿರುವ ಘಟನೆ ನವನಗರದ ಅಂಬೇಡ್ಕರ್ ಭವನ ಮತಗಟ್ಟೆಯಲ್ಲಿ ಜರುಗಿದೆ.

ಮತಗಟ್ಟೆಯಲ್ಲಿ ಬವಿವ ಸಂಘದ ಎಸ್.ನಿಜಲಿಂಗಪ್ಪ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಹಕ್ಕು ಚಲಾಯಿಸುವುದಕ್ಕೆ ಪ್ರತಿ ಚುನಾವಣೆಯಂತೆ ಈ ಚುನಾವಣೆಯಲ್ಲೂ ಆಕ್ಷೇಪ ವ್ಯಕ್ತಪಡಿಸಿದರು.

ಮತಗಟ್ಟೆಯಲ್ಲಿ ಕಾಲೇಜಿನ ನೌಕರರು ಏಜೆಂಟರಾಗಿರುವುದು ಏಕೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ ಆಕ್ಷೇಪ ವ್ಯಕ್ತಪಡಿಸಿದರು. ನಂತರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮತಗಟ್ಟೆಗೆ ಧಾವಿಸಿದರು. ಈ ವೇಳೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈ.ಅಮರನಾಥ ರೆಡ್ಡಿ, ಡಿವೈಎಸ್ಪಿ ಪಂಪನಗೌಡ ಇತರರು ಇದ್ದರು.