ಹೊರ ಹೋದವರು ವಾಪಸ್ ಬರುವ ಗ್ಯಾರಂಟಿ ಇಲ್ಲ

Advertisement

ದಾವಣಗೆರೆ: ಹುಬ್ಬಳ್ಳಿಯಲ್ಲಿ ಹಾಡ ಹಗಲೇ ಕಾಲೇಜು ಕ್ಯಾಂಪಸ್​ನಲ್ಲಿ ಹೆಣ್ಣು ಮಗಳ ಹತ್ಯೆ ಆಯಿತು. ಇದರಲ್ಲೂ ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ನೋಡಿತು. ನೇಹಾ ಹತ್ಯೆ ಸಾಮಾನ್ಯ ಘಟನೆ ಅಲ್ಲ. ಬೆಳಗ್ಗೆ ಮನೆಯಿಂದ ಹೋದವರು ವಾಪಸ್ ಬರುವ ಗ್ಯಾರಂಟಿ ಇಲ್ಲ ಎಂದು ಮೋದಿ ಕಾಂಗ್ರೆಸ್​ ಸರ್ಕಾರ ವಿರುದ್ಧ ವಾಗ್ಧಾಳಿ ಮಾಡಿದ್ದಾರೆ.
ದಾವಣಗೆರೆ ಸಮಾವೇಶದಲ್ಲಿ ಮೋದಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ಕರ್ನಾಟಕದಲ್ಲಿ ಕಾನೂನು ಸುವ್ಯಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ಜನತೆಯ ಸುರಕ್ಷತೆ ಕ್ಷೀಣಿಸುತ್ತಿದೆ. ಮನೆಯಿಂದ ಹೊರಗೆ ಹೋದವರು ರಾತ್ರಿ ಸುರಕ್ಷಿತವಾಗಿ ಮನೆಗೆ ಮರಳುತ್ತಿಲ್ಲ ಎಂದರು.