SK Home Ad
Home ಸುದ್ದಿ ರಾಜ್ಯ ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾ ರೆಡ್ಡಿ

ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾ ರೆಡ್ಡಿ

0
204

ಬೆಂಗಳೂರು: ಡಿ.ಕೆ. ಶಿವಕುಮಾರ್‌ ನೇತೃತ್ವದ ಸರಕಾರದಲ್ಲಿ ಮುಖ್ಯಮಂತ್ರಿಯೊಂದಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಬಳಿಕ 48 ಗಂಟೆಯೊಳಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ ಇಂದು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ.

ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಸಫಲರಾಗಿದ್ದೇವೆ. ಸಚಿವ ಸ್ಥಾನಕ್ಕೆ ಅವರು ಕೊಟ್ಟ ರಾಜೀನಾಮೆಯನ್ನು ವಾಪಸ್‌ ಪಡೆದಿದ್ದಾರೆ ಎಂದು ಹೇಳಿದರು.

ಇನ್ನು ಮುಂದೆ ಅವರು ಡಿ.ಕೆ. ಶಿವಕುಮಾರ್‌ ಅವರ ಸಚಿವ ಸಂಪುಟದಲ್ಲಿ ಮುಂದುವರಿದು ರಾಮಲಿಂಗಾರೆಡ್ಡಿ ಅವರು ಕೆಲಸ ಮಾಡಲಿದ್ದಾರೆ ಎಂದು ಸುರ್ಜೇವಾಲ ಸ್ಪಷ್ಟಪಡಿಸಿದರು.