SK Home Ad
Home ಸುದ್ದಿ ರಾಜ್ಯ ಹವಾಮಾನ ವರದಿ: ರಾಜ್ಯದ ಹಲವೆಡೆ ಜೂನ್ 13ರವರೆಗೆ‌ ರೆಡ್ ಅಲರ್ಟ್

ಹವಾಮಾನ ವರದಿ: ರಾಜ್ಯದ ಹಲವೆಡೆ ಜೂನ್ 13ರವರೆಗೆ‌ ರೆಡ್ ಅಲರ್ಟ್

0
28

ಬೆಂಗಳೂರು: ನೈಋತ್ಯ ಮಾನ್ಸೂನ್ ಅಬ್ಬರದಿಂದ ರಾಜ್ಯದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಜೂ. 13ರವರೆಗೆ ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಘೋಷಿಸಿತ್ತು. ಬುಧವಾರದಂದು ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ವಿಸ್ತರಿಸಲಾಗಿದೆ.

ಈ ಅವಧಿಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸರಾಸರಿ ಮಳೆಗಿಂತ ಸ್ವಲ್ಪ ಕಡಿಮೆ ಮಳೆಯಾಗಿದ್ದು, ಸಾಮಾನ್ಯ ಮಳೆಯಾದ 138 ಮಿ.ಮೀ.ಗೆ ಬದಲಾಗಿ 128 ಮಿ.ಮೀ. ಮಳೆಯಾಗಿದೆ. ಉತ್ತರ ಕರ್ನಾಟಕದ ಉತ್ತರ ಭಾಗದಲ್ಲಿ ಶೇ. 42ರಷ್ಟು ಹೆಚ್ಚುವರಿ ಮಳೆಯಾಗಿದ್ದು, ಪೂರ್ವ ಮಾನ್ಸೂನ್‌ನಲ್ಲಿ ಸಾಮಾನ್ಯ ಮಳೆಯಾದ 72 ಮಿ.ಮೀ.ಗೆ ಬದಲಾಗಿ 112 ಮಿ.ಮೀ. ಮಳೆಯಾಗಿದೆ.

ಮಾನ್ಸೂನ್‌ನ ಉತ್ತರ ರೇಖೆಯು ರಾಜ್ಯದ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಆವರಿಸಿದೆ. ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಗುರುವಾರ ಮಾನ್ಸೂನ್ ಆರಂಭವಾಗಿದೆ. ಈ ಋತುವಿನಲ್ಲಿ ಒಟ್ಟಾರೆ ಮಳೆ 125 ಮಿ.ಮೀ ಆಗಿದ್ದು, ದೀರ್ಘಕಾಲದ ಸರಾಸರಿ ಮಳೆ 115 ಮಿ.ಮೀ. ಆಗಿದ್ದು, ಇದು ಶೇಕಡಾ 8 ರಷ್ಟು ಹೆಚ್ಚಾಗಿದೆ.