ನವದೆಹಲಿ: 2007ರ ಜೂನ್ 23ರಂದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಕಾಲಿಟ್ಟಿದ್ದ ರೋಹಿತ್ ಶರ್ಮಾ, 16 ವರ್ಷಗಳ ಬಳಿಕ ಅದೇ ದಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ‘ಪದ್ಮಶ್ರೀ’ ಪುರಸ್ಕಾರವನ್ನು ಪ್ರದಾನ ಮಾಡಲಾಗಿದೆ.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರೋಹಿತ್ ಶರ್ಮಾಗೆ ಈ ಪ್ರಶಸ್ತಿ ನೀಡಿ ಗೌರವಿಸಿದರು.
ಭಾರತೀಯ ಕ್ರಿಕೆಟ್ಗೆ ಅವರು ನೀಡಿದ ಅದ್ಭುತ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ ತಂಡವು 2024ರ ಟಿ20 ವಿಶ್ವಕಪ್ ಮತ್ತು 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು.
ಏಕದಿನ ಕ್ರಿಕೆಟ್ನಲ್ಲಿ ಮೂರು ದ್ವಿಶತಕ ಹಾಗೂ ಗರಿಷ್ಠ ವೈಯಕ್ತಿಕ ರನ್ (264) ಬಾರಿಸಿದ ವಿಶ್ವ ದಾಖಲೆ ಇವರ ಹೆಸರಿನಲ್ಲಿದೆ. ಪ್ರಶಸ್ತಿ ಸ್ವೀಕರಿಸುವ ವೇಳೆ ರೋಹಿತ್ ಪತ್ನಿ ರಿತಿಕಾ ಸಾಜ್ದೇ ಸೇರಿದಂತೆ ದೇಶಾದ್ಯಂತ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.






















