ಹುಬ್ಬಳ್ಳಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಅದನ್ನು ಮುಚ್ಚಿಹಾಕುವ ಸಲುವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪರಿಷ್ಕರಣೆಯ ಸಬೂಬು ಹೇಳುತ್ತಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು.
ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯಲ್ಲಿ ನಡೆದಿರುವ ಅವ್ಯವಹಾರವನ್ನು ರಾಜ್ಯದ ಜನರ ಗಮನಕ್ಕೆ ತರಲಾಗಿದೆ. ಈ ಸಂಬಂಧ ಅದಕ್ಕೆ ತೇಪೆ ಹಚ್ಚುವ ಕೆಲಸವನ್ನೂ ಸಿದ್ದರಾಮಯ್ಯ ಸರ್ಕಾರ ಮಾಡಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಆಗಿನ ಸಚಿವರು, ಮುಖ್ಯಮಂತ್ರಿ ಇಬ್ಬರೂ ಬದಲಾಗಿದ್ದಾರೆ. ಈಗ ಜನ ಯಾರನ್ನು ಕೇಳಬೇಕು ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಹರಿಹರದಲ್ಲಿ ಬಂಧಿತ ಶಂಕಿತ ಉಗ್ರನಿಂದ ಬೆಚ್ಚಿಬೀಳಿಸುವ ಮಾಹಿತಿ: ಅಯೋಧ್ಯೆಯ ರಾಮ ಮಂದಿರ ಗುರಿಯಾಗಿತ್ತೇ?
ಡಿ.ಕೆ. ಶಿವಕುಮಾರ ಅವರು ಯೋಜನೆಯ ಪರಿಷ್ಕರಣೆಯ ನೆಪದಲ್ಲಿ ಕಳೆದ ಮೂರು ವರ್ಷಗಳಲ್ಲಾದ ಹಗರಣಗಳನ್ನು ಮರೆಮಾಚುವ ಸಿದ್ಧತೆ ನಡೆಸಿದ್ದಾರೆ. ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಲಾಗುವುದು ಎಂದರು.






















