SK Home Ad
Home ನಮ್ಮ ಜಿಲ್ಲೆ ಬೆಂಗಳೂರು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ

ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ

0
136

ಬೆಂಗಳೂರು: “ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ನಾನು ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ರವಾನಿಸಿದ್ದೇನೆ. ನಮ್ಮಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳು ಇದ್ದಾರೆ. ಬಹಳ ಶಾಸಕರು ಅರ್ಹರಿದ್ದಾರೆ. ಕೆಲವು ಸಂದರ್ಭದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

2004ರಲ್ಲಿ ನನ್ನನ್ನೂ ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಆರಂಭದಲ್ಲಿ ನನ್ನನ್ನು ಮಂತ್ರಿ ಮಾಡಿರಲಿಲ್ಲ. ಆಗ ನಾವು ತಾಳ್ಮೆಯಿಂದ ಇದ್ದೆವು, ತಾಳ್ಮೆಯಿಂದ ಇದ್ದ ಕಾರಣಕ್ಕೆ ಇಂದು ನಾನು ಈ ಸ್ಥಾನದಲ್ಲಿ ಇದ್ದೇನೆ” ಎಂದು ಹೇಳಿದರು.