SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಬೆಣ್ಣೆನಗರಿಯಲ್ಲಿ ಸುರಿದ ಮಳೆ: ಜನಜೀವನ ಅಸ್ತವ್ಯಸ್ತ

ಬೆಣ್ಣೆನಗರಿಯಲ್ಲಿ ಸುರಿದ ಮಳೆ: ಜನಜೀವನ ಅಸ್ತವ್ಯಸ್ತ

0
103

ದಾವಣಗೆರೆ: ನಗರದಲ್ಲಿ ಮಂಗಳವಾರ ಮಧ್ಯಾಹ್ನ ಉತ್ತಮ ಮಳೆಯಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪಾದಚಾರಿಗಳು ಹಾಗೂ ವಾಹನ ಸವಾರರು ತೊಂದರೆ ಅನುಭವಿಸಿದರು.

ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನ ಸುಮಾರು 2.30ಕ್ಕೆ ಆರಂಭವಾದ ಮಳೆ ಸುಮಾರು ಎರಡು ತಾಸು ನಿರಂತರವಾಗಿ ಸುರಿಯಿತು. ನಂತರ ಜಿಟಿಜಿಟಿಯಾಗಿ ಮಳೆ ಮುಂದುವರಿಯಿತು.

ಮಳೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ನಿಧಾನಗೊಂಡಿತು. ಶಾಲೆ ಮತ್ತು ಕಾಲೇಜು ಬಿಡುವಿನ ವೇಳೆಗೆ ಮಳೆ ಸುರಿದ ಕಾರಣ ವಿದ್ಯಾರ್ಥಿಗಳು ಹಾಗೂ ಪೋಷಕರು ಪರದಾಡುವಂತಾಯಿತು. ಪಾದಚಾರಿಗಳು ಮಳೆಯಿಂದ ರಕ್ಷಿಸಿಕೊಳ್ಳಲು ಅಂಗಡಿ ಮುಂಗಟ್ಟುಗಳಲ್ಲಿ ಆಶ್ರಯ ಪಡೆದ ದೃಶ್ಯ ಸಾಮಾನ್ಯವಾಗಿತ್ತು.

ಮಳೆಯಿಂದಾಗಿ ನಗರದ ಹಲವೆಡೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಸಾರ್ವಜನಿಕ ಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತು. ಆದರೆ ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದ್ದು, ರೈತರಲ್ಲಿ ಆಶಾಭಾವನೆ ಮೂಡಿಸಿದೆ.