ದಾವಣಗೆರೆ: ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆಗಿ ಸಾಹಿತ್ಯ ಎಂ. ಅಲದಕಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಸಾಹಿತ್ಯ ಎಂ. ಅಲದಕಟ್ಟಿ ಅವರು 2022ನೇ ಬ್ಯಾಚ್ನ ಕರ್ನಾಟಕ ಕೇಡರ್ನ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯಾಗಿದ್ದಾರೆ. 1993ರ ಮೇ 6ರಂದು ಜನಿಸಿರುವ ಅವರು, 33ನೇ ವಯಸ್ಸಿನಲ್ಲಿ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಸಿಇಒ ಹುದ್ದೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಪ್ರಸ್ತುತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾಗಿ ಕಾರ್ಯನಿರ್ವಹಿಸುತ್ತಿದ್ದ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರನ್ನು ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ಸರ್ಕಾರ ವರ್ಗಾವಣೆಗೊಳಿಸಿದೆ.






















