ವಿ. ಸೋಮಣ್ಣ ನಮ್ಮ ಜೊತೆ ಇರುತ್ತಾರೆ

0
36
BASAVARAJ BOMAI

ಹುಬ್ಬಳ್ಳಿ: ಸಚಿವ ವಿ.ಸೋಮಣ್ಣ ಮತ್ತು ನಾನು ಹಳೆಯ ಸ್ನೇಹಿತರು, ಅವರು ನಮ್ಮ ಜೊತೆಗಿದ್ದಾರೆ. ಮುಂದೆಯೂ ಜೊತೆಗೆ ಇರತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕದಲ್ಲಿ ಮೋದಿ ಸುನಾಮಿ ಶುರುವಾಗಿದೆ. ಪ್ರಧಾನಿ ಮೋದಿ ಅವರು ರಾಜ್ಯದ ಹಲವೆಡೆ ಪ್ರಚಾರ ಮಾಡಿದ್ದಾರೆ. ಅವರು ಬಂದು ಹೋಗಿದ್ದರಿಂದ ಮೋದಿ ಮತ್ತು ಬಿಜೆಪಿ ಪರ ಒಲವು ಹೆಚ್ಚಾಗಿದೆ. ರಾಜ್ಯದಲ್ಲಿ ಮೋದಿ ಸುನಾಮಿ ಎದ್ದಿದೆ ಎಂದರು.
ಇನ್ನು ಕಾಮಗಾರಿಗಳ ಕ್ರೆಡಿಟ್ ವಾರ್ ವಿಚಾರವಾಗಿ ಮಾತನಾಡಿ, ಸಹಜವಾಗಿಯೇ ಕ್ರೆಡಿಟ್ ವಾರ್ ಇದೆ. ಪಕ್ಕದ ಮನೆಯವಳು ಗಂಡು ಹಡೆದರೆ ಇವರು ಪೇಡೆ ಹಂಚುವ ಕೆಲಸ ಮಾಡ್ತಿದ್ದಾರೆಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಗೆ ಸಿಎಂ ಟಾಂಗ್ ಕೊಟ್ಟರು. ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಮುಷ್ಕರ ಕರೆ ವಿಚಾರವಾಗಿ ಮಾತನಾಡಿದ ಅವರು, ಅವರ ಜೊತೆ ನಮ್ಮವರು ಮಾತುಕತೆ ನಡೆಸಿದ್ದಾರೆ. ಇಂಧನ ಸಚಿವರು ಚರ್ಚೆಯಲ್ಲಿದ್ದಾರೆ ಕೂಡಲೇ ಅದನ್ನು ಬಗೆಹರಿಸುತ್ತಾರೆ. ನಮ್ಮ ಸಚಿವರು ಈಗಾಗಲೇ ಎರಡು ಸುತ್ತಿನ ಮಾತುಕತೆ ಮಾಡಿದ್ದಾರೆ. ಎಲ್ಲ ವಿವರಗಳನ್ನ ಹಂಚಿಕೊಳ್ಳೋಕೆ ಆಗಲ್ಲ ಎಂದರು.
ಮೋದಿ ದೇವರು ಎಂಬ ಕಾಂಗ್ರೆಸ್ ಟೀಕೆ ವಿಚಾರವಾಗಿ ಮಾತನಾಡಿ, ನಾವು ಮೋದಿ ಅವರನ್ನು ದೇವರು ಅಂದಿಲ್ಲ. ಮೋದಿ ಅವರೂ ತಮ್ಮನ್ನು ದೇವರು ಅಂತ ಅಂದುಕೊಂಡಿಲ್ಲ. ನರೇಂದ್ರ ಮೋದಿ ಅವರು ಒಬ್ಬ ಮಹಾನ್ ನಾಯಕ. ಮೋದಿ ಗಡಿಯಲ್ಲಿ ಭದ್ರತೆ ನೀಡಿ ಅತ್ಯಂತ ಕಷ್ಟಕಾಲದಲ್ಲಿ ಭಾರತವನ್ನು ಎತ್ತಿ ಹಿಡಿದಿದ್ದಾರೆ. ಆಂತರಿಕ ಸುರಕ್ಷತೆ ತಂದು ದೇಶ ಸುಭದ್ರಗೊಳಿಸಿದ್ದಾರೆ. ದೇಶಕ್ಕೆ ಮೋದಿ ಆಪತ್ಬಾಂಧವ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ರೌಡಿಶೀಟರ್ ಫೈಟರ್ ರವಿಗೆ ಮೋದಿ ನಮಸ್ಕಾರ ವಿಚಾರವಾಗಿ ಮಾತನಾಡಿ, ಪ್ರಧಾನಿ ಹುದ್ದೆಗೆ ಕಳಂಕ ತಂದಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್‌ಗೆ ಪ್ರತಿಕ್ರಿಯಿಸಲು ನಿರಾಕರಣೆ. ಸಾರ್ವಜನಿಕವಾಗಿ ಯಾರೇ ಬಂದ್ರೂ ಮೋದಿ ನಮಸ್ಕಾರ ಮಾಡ್ತಾರೆ ಎಂದು ಸ್ಪಷ್ಟನೆ ನೀಡಿದರು.

Previous articleಆಸ್ಕರ್ ಪ್ರಶಸ್ತಿ ಗೆದ್ದ ಭಾರತದ ಕಿರುಚಿತ್ರ ಹಾಗೂ ನಾಟು ನಾಟು ಗೀತೆ
Next articleಆಸ್ಕರ್​ ಗೌರವ ಪಡೆದ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ