SK Home Ad
Home ತಾಜಾ ಸುದ್ದಿ ಸವದಿ, ಶೆಟ್ಟರ್ ಕಾಂಗ್ರೆಸ್‌ಗೆ ಹೋಗಿರೋದು ಬಿಜೆಪಿಗೆ ಪ್ಲಸ್

ಸವದಿ, ಶೆಟ್ಟರ್ ಕಾಂಗ್ರೆಸ್‌ಗೆ ಹೋಗಿರೋದು ಬಿಜೆಪಿಗೆ ಪ್ಲಸ್

0
218
cm

ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ ಎಂದರು. ಸವದಿ, ಶೆಟ್ಟರ್ ಕಾಂಗ್ರೆಸ್‌ಗೆ ಹೋಗಿರೋದು ಬಿಜೆಪಿಗೆ ಪ್ಲಸ್ ಆಗುತ್ತದೆ. ಅವರ ಕ್ಷೇತ್ರದಲ್ಲಿ ಅವರ ವಿರುದ್ಧ ಜನರು ಮಾತನಾಡುತ್ತಿದ್ದಾರೆ. ಎಲ್ಲಾ ಪದವಿ ಪಡೆದು ನಂತರ ಕಾಂಗ್ರೆಸ್‌ಗೆ ಹೋಗಿದ್ದು ಜನರು ಅವರನ್ನು ಒಪ್ಪುವುದಿಲ್ಲ ಎಂದರು.