ಕಿಂಗ್‌ಪಿನ್ ಆರ್.ಡಿ. ಮಹಾರಾಷ್ಟ್ರ ರಾಜ್ಯಕ್ಕೆ ಎಸ್ಕೇಪ್?

0
11

ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಎಫ್‌ಡಿಎ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಅವರ ಬೆಂಬಲಿಗರು ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಅಥವಾ ಪುಣೆಗೆ ಕಾರ್‌ನಲ್ಲಿ ಬಿಟ್ಟು ಬಂದಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದೆ. ಈ ಬಗ್ಗೆ ಕಲಬುರಗಿ ಪೊಲೀಸರು ಎಲ್ಲ ಆಯಮಾದಿಂದಲೂ ಮಾಹಿತಿ ಸಂಗ್ರಹಿಸಿ ತನಿಖೆ ಚುರುಕುಗೊಳಿಸಿದ್ದಾರೆ.
ಅಕ್ರಮ ಪರೀಕ್ಷೆ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಅವರನ್ನು ಕಾರ್‌ನಲ್ಲಿ ಡ್ರಾಪ್ ನೀಡಿದ ಮಾಹಿತಿ ಮೇರೆಗೆ ಆತನ ಕೆಲ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ೫೪೫ ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲೂ ಪುಣೆ, ಸೊಲ್ಲಾಪುರದಲ್ಲಿ ತಲೆಮರೆಸಿಕೊಂಡಿದ್ದ. ಸೊಲ್ಲಾಪುರ, ಪುಣೆ ತನ್ನ ಅಡಗು ತಾಣ ಮಾಡಿಕೊಂಡಿದ್ದು, ಇಲ್ಲಿ ಈತನಿಗೆ ಅನೇಕ ಜನ ಪರಿಚಯಸ್ಥರಿದ್ದಾರೆ ಎಂದು ಹೇಳಲಾಗಿದೆ. ಈ ಹಿಂದೆ ಪಿಎಸ್‌ಐ ಪರೀಕ್ಷೆ ಅಕ್ರಮ ನಡೆದಾಗ ಸಹಿತ ಇಲ್ಲಿ ಅಡಗಿಕೊಂಡಿದ್ದ ಮಾಹಿತಿ ಮೇರೆಗೆ ಆತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಬುಧವಾರ ಅಥವಾ ಗುರುವಾರದೊಳಗೆ ಬಂಧಿಸುವ ಸಾಧ್ಯತೆಗಳು ದಟ್ಟವಾಗಿದ್ದು, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಪೊಲೀಸರಿಗೆ ಶರಣಾಗಲೇಬೇಕು.

Previous articleಕಲ್ಯಾಣ ಕರ್ನಾಟಕ ಅಭಿವೃದ್ದಿಗೆ ಸರ್ಕಾರ ಬದ್ಧ
Next articleಕಾಡಾನೆ ದಾಳಿಗೆ ಬಲಿಯಾದ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ