ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂಗ್ಲಿಷ್ ಬೋರ್ಡ್ಗಳನ್ನು ಪೀಸ್ ಪೀಸ್ ಮಾಡಿದ ಘಟನೆ ಲಾವೆಲ್ಲಿ ರಸ್ತೆಯಲ್ಲಿ ನಡೆದಿದೆ.
ಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಅಭಿಯಾನ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಆಂಗ್ಲ ಭಾಷಾ ಫಲಕಗಳನ್ನು ಕಿತ್ತು ಹಾಕಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಟಿ.ಎ. ನಾರಾಯಣಗೌಡರ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.