Home Advertisement
Home ತಾಜಾ ಸುದ್ದಿ ಬಡತನದಿಂದ ಮುಕ್ತಿ

ಬಡತನದಿಂದ ಮುಕ್ತಿ

0
106

ನವದೆಹಲಿ: 2047 ರ ವೇಳೆಗೆ ಭಾರತವನ್ನು ವಿಕಸಿತ ಭಾರತ ಮಾಡಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಹೇಳಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ವೇಳೆ “ನಮ್ಮ ಗಮನ ಸಬ್ಕಾ ಸಾಥ್, ಸಬ್ಕಾ ವಿಕಾಸ್” ಆಗಿದೆ, ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರಿಗೆ ಬಡತನದಿಂದ ಮುಕ್ತಿ ಪಡೆಯಲು ಸರ್ಕಾರ ಸಹಾಯ ಮಾಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.