SK Home Ad
Home ನಮ್ಮ ಜಿಲ್ಲೆ ಧಾರವಾಡ ಆಕಳ ಕರುವಿಗೆ ಕೃತಕ ಕಾಲು ಜೋಡಣೆ: ಮಿಡಿದ ಮಹಾವೀರ ಲಿಂಬ್ ಸೆಂಟರ್

ಆಕಳ ಕರುವಿಗೆ ಕೃತಕ ಕಾಲು ಜೋಡಣೆ: ಮಿಡಿದ ಮಹಾವೀರ ಲಿಂಬ್ ಸೆಂಟರ್

0
108

ಮಹಾವೀರ ಲಿಂಬ್ ಸೆಂಟರ್ ಹಾಗೂ ಆಲ್ ಇಂಡಿಯಾ ಜೈನ್ ಯುಥ್ ಫೆಡರೇಷನ್ ವತಿಯಿಂದ ಅಭಿನವನಗರದ ವಿಶ್ವ ಹಿಂದೂ ಪರಿಷತ್ ಸಂಚಾಲಿತ ಗೋ ಸೇವಾ ಕೇಂದ್ರದಲ್ಲಿ ರೈಲು ಅಪಘಾತದಲ್ಲಿ ಕಾಲು ಕಳೆದುಕೊಂಡ ಆಕಳ ಕರುವಿಗೆ ಕೃತಕ ಕಾಲು ಜೋಡಣೆ ಮಾಡಲಾಯಿತು.
ಧಾರವಾಡದಲ್ಲಿ ರೈಲು ಹಳಿಯಲ್ಲಿ ಹೋಗುತ್ತಿದ್ದ ಆಕಳು ಕರು ಅಪಘಾತವಾಗಿತ್ತು. ಈ ಸಂದರ್ಭದಲ್ಲಿ ಆಕಳು ಸಾವನ್ನಪ್ಪಿದ್ದು, ಕರು ಬಚಾವ್ ಆಗಿತ್ತು. ಆದರೆ ಹಿಂದಿನ ಕಾಲು‌ ಕಟ್ ಆಗಿದ್ದರಿಂದ ಕರು ನಡೆದಾಡಲು ತೀವ್ರ ತೊಂದರೆಯಾಗಿತ್ತು. ಇದನ್ನು ಗುರುತಿಸಿ ಮಹಾವೀರ ಲಿಂಬ್ ಸೆಂಟರ್ ವತಿಯಿಂದ ಅಳತೆ ಪಡೆದು ಕೃತಕ ಕಾಲು ಜೋಡಣೆ ಮಾಡಲಾಯಿತು.