Home Advertisement
Home ತಾಜಾ ಸುದ್ದಿ ಕನ್ನೇರಿ ಮಠವನ್ನು ಕರ್ನಾಟಕದಲ್ಲಿಯೂ ಸ್ಥಾಪಿಸಲು ಸಿಎಂ ಬೊಮ್ಮಾಯಿ ಆಹ್ವಾನ

ಕನ್ನೇರಿ ಮಠವನ್ನು ಕರ್ನಾಟಕದಲ್ಲಿಯೂ ಸ್ಥಾಪಿಸಲು ಸಿಎಂ ಬೊಮ್ಮಾಯಿ ಆಹ್ವಾನ

0
128
ಕನ್ನೇರಿ ಮಠ

ಮಹಾರಾಷ್ಟ್ರ: ಕರ್ನಾಟಕದಲ್ಲಿ ಕನ್ನೇರಿ ಮಠವನ್ನು ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಹ್ವಾನ ನೀಡಿದರು.
ಅವರು ಇಂದು ಕೊಲ್ಹಾಪುರದಲ್ಲಿ ಆಯೋಜಿಸಿರುವ ʻಸಂತ ಸಮಾವೇಶʼವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಠದ ನಿರ್ಮಾಣಕ್ಕೆ ಅಗತ್ಯವಿರುವ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಮೂರು ಕೋಟಿ ಅನುದಾನ ಒದಗಿಸಲಾಗಿದ್ದು ಕೂಡಲೇ ಕಾಮಗಾರಿ ಪ್ರಾರಂಭಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಮುಂಬರುವ ದಿನಗಳಲ್ಲಿ ಎರಡು ಕೋಟಿ ರೂ.ಗಳ ಅನುದಾನ ಒದಗಿಸುವುದಾಗಿ ತಿಳಿಸಿದರು.