SK Home Ad
Home ತಾಜಾ ಸುದ್ದಿ ಕಲ್ಯಾಣ ಮಾಡಿದವರು ಸೋನಿಯಾ

ಕಲ್ಯಾಣ ಮಾಡಿದವರು ಸೋನಿಯಾ

0
237
ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಪ್ರಸಕ್ತ ಆಡಳಿತ ನಡೆಸುತ್ತಿರುವ ಬಿಜೆಪಿ ಕನ್ನಡ ನಾಡು ಕಂಡ ಅತೀ ಕೆಟ್ಟ ಸರ್ಕಾರ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿಯಲ್ಲಿ ನಡೆದ ಬೃಹತ್ ಐಕ್ಯತಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಮಕ್ಕಳಿಗೆ ಉದ್ಯೋಗ ನೀಡಿದವರು ಸೋನಿಯಾ ಮತ್ತು ರಾಹುಲ್ ಗಾಂಧಿ. ಅವರು ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಮೂಲಕ ಇಲ್ಲಿನ ನಿರುದ್ಯೋಗ ಶಮನ ಮಾಡಿದ ಕಾಂಗ್ರೆಸ್‌ಗೆ ಮುಂದಿನ ಚುನಾವಣೆಯಲ್ಲಿ ಆಶೀರ್ವದಿಸಬೇಕು ಎಂದು ಕೋರಿದರು.
ಸೋನಿಯಾ-ರಾಹುಲ್ ಮನಸ್ಸು ಮಾಡದಿದ್ದರೆ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ದೊರೆಯುತ್ತಿರಲಿಲ್ಲ ಎಂದರು.