Home Advertisement
Home ತಾಜಾ ಸುದ್ದಿ ಕೇಂದ್ರ ಸರಕಾರ ರಾಜ್ಯದ ಎಲ್ಲಾ ಬೇಡಿಕೆ ಪೂರೈಸಲು ಬದ್ಧ

ಕೇಂದ್ರ ಸರಕಾರ ರಾಜ್ಯದ ಎಲ್ಲಾ ಬೇಡಿಕೆ ಪೂರೈಸಲು ಬದ್ಧ

0
162

ನವದೆಹಲಿ: ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.


ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಲ್ಹಾದ ಜೋಶಿ ಪೋಸ್ಟ್‌ ಮಾಡಿದ್ದು ಕರ್ನಾಟಕ ರಾಜ್ಯ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಅವರು ಇಂದು ದೆಹಲಿಯ ನನ್ನ ಕಚೇರಿಗೆ ಭೇಟಿ ನೀಡಿ,ಹೆಚ್ಚುವರಿ ಅಕ್ಕಿ ಪೂರೈಕೆಗೆ ರಾಜ್ಯ ಸರಕಾರದ ಮನವಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ಎಲ್ಲಾ ಬೇಡಿಕೆಯನ್ನು ಪೂರೈಸಲು ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.