ಡಿ. 10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ

0
27

ಅನ್ನ ಕೊಡುವ ಅಮಾಯಕ ರೈತರ ಭೂಮಿ ಕಸಿಯುವ ಹುನ್ನಾರ ಮಾಡಬೇಡಿ. ಅನ್ಯಾಯದ ಅಕ್ರಮ ಭೂಮಿ ಒಡೆತನಕ್ಕೆ ವಿರೋಧವಿದೆ

ವಿಜಯನಗರ (ಹೊಸಪೇಟೆ):- ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಡಿ. 10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋಣ ಎಂದು ಜಯ ಮೃತ್ಯುಂಜಯ ಶ್ರೀ ಕರೆ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ನಮ್ಮ ಸಮಾಜದ ಋಣ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲಿದೆ. ಹೀಗಾಗಿ ಆ ಋಣ ತೀರಿಸಲು ಮೀಸಲಾತಿ ಜಾರಿ ಮಾಡಲಿ ಎಂದರು. ವಿಜಯನಗರದ ರಾಜಧಾನಿ ಹೊಸಪೇಟೆಯಿಂದಲೇ ನಮ್ಮಸಮಾಜಕ್ಕೆ ನಾನು ಕರೆ ನೀಡುವೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಹೋರಾಟಕ್ಕೆ ಕೈ ಜೋಡಿಸಿ. ಡಿ. 10ರಂದು ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕೋಣ. ಲಕ್ಷ, ಲಕ್ಷ ಪಂಚಮಸಾಲಿಗಳು ಬೆಳಗಾವಿಗೆ ಬರ್ತಾರೆ, 5 ಸಾವಿರ ಟ್ರಾಕ್ಟರ್ ಗಳು ಸೌಧಕ್ಕೆ ತರ್ತಾರೆ. ಹೀಗಾಗಿ ನೀವು ಬೆಂಬಲಿಸಿ ಎಂದು ಶ್ರೀಗಳು ಮನವಿ ಮಾಡಿದ್ದಾರೆ.
ಮೀಸಲಾತಿಗಾಗಿ ನಾವು 7ನೇ ಹಂತದ ಹೋರಾಟ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೀಸಲಾತಿ ಜಾರಿ ಮಾಡುತ್ತದೆ ಎಂಬ ನಂಬಿಕೆ ಇತ್ತು. ಅದು ಹುಸಿಯಾಗಿದೆ. ಈ ಹಿಂದೆ ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿಯೂ ಮುತ್ತಿಗೆ ಹಾಕಿದ್ದೇವೆ, ಸರ್ಕಾರ ಈಗಲಾದರೂ ಮೀಸಲಾತಿ ಭರವಸೆ ನೀಡಬೇಕು, ಈ ಹಿಂದಿನ ಸಭೆಯಲ್ಲಿ ನೀತಿ ಸಂಹಿತೆ ನೆಪ ಮಾಡಿ ಬೇಸರವಾಗುವಂತೆ ಮಾಡಿದರು. ಆದರೆ ಹೋರಾಟ ನಿಲ್ಲುವುದಿಲ್ಲ. ಮುಖ್ಯಮಂತ್ರಿ ಅವರು ಮೀಸಲಾತಿ ಕುರಿತು ಸ್ಪಷ್ಟ ಭರವಸೆ ಕೊಡುವವರೆಗೆ ಈ ಹೋರಾಟ ನಿರಂತರ ಮುಂದುವರಿಯಲಿದೆ. ಯಾರೂ ಕುತಂತ್ರಕ್ಕೆ ಮಣಿಯಬಾರದು, ಪಕ್ಷಾತೀತವಾಗಿ ಸಮಾಜದ ಪರವಾಗಿ ಹೋರಾಟ ಮಾಡಿ. ನಮ್ಮಜೊತೆ ಬಂದರೆ ನಿಮ್ಮ ಅಧಿಕಾರಕ್ಕೆ ಕುತ್ತು ಬರುವುದಾದರೆ ಬಹಿರಂಗವಾಗಿ ಬರದೆ ಅಧಿವೇಶನದಲ್ಲಿ ಸಮಾಜದ ಪರವಾಗಿ ಧ್ವನಿ ಎತ್ತಿ ಎಂದರು.

ವಕ್ಸ್ ಆಸ್ತಿ ವಿವಾದ: ವಕ್ಸ್ ವಿಚಾರ- ಆಯಾ ಧರ್ಮದ ಅಭಿವೃದ್ಧಿ ಮಂಡಳಿ. ಆ ಧರ್ಮಕ್ಕೆ ಸಂಬಂಧಿಸಿದ ಅಭಿವೃದ್ಧಿ ಕೆಲಸ ಮಾಡಲಿ. ಅನ್ನ ಕೊಡುವ ಅಮಾಯಕ ರೈತರ ಭೂಮಿ ಕಸಿಯುವ ಹುನ್ನಾರ ಮಾಡಬೇಡಿ. ಅನ್ಯಾಯದ ಅಕ್ರಮ ಭೂಮಿ ಒಡೆತನಕ್ಕೆ ವಿರೋಧವಿದೆ. ರೈತರಿಗೆ ಅನ್ಯಾಯವಾದಾಗ ಅವರ ಪರವಾಗಿಯೇ ಇರುತ್ತೇವೆ.

Previous articleಕನ್ನಡದ ಕಲಬೆರಕೆಗೆ ತಡೆ ಅವಶ್ಯ
Next articleBPL ಕಾರ್ಡ್‌ನಲ್ಲಿ ಬಡವರಿದ್ದರೆ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ