SK Home Ad
Home ಆರೋಗ್ಯ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿದೆ.

ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿದೆ.

0
232

ಕಳಪೆ ಔಷಧಿಗಳಿಂದ ಬಾಣಂತಿಯರ ಸರಣಿ ಸಾವು, ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ

ಬೆಂಗಳೂರು: ಸ್ವತಃ ರಾಜ್ಯ ಸರ್ಕಾರವೇ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಿ ಕೊಟ್ಟು ಜನರನ್ನು ಕೊಲ್ಲುತ್ತಿರುವಾಗ, ಇನ್ನು ಮಾಫಿಯಾಗಳು ಸುಮ್ಮನೆ ಇರುತ್ತವೆಯೇ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಡ್ರಗ್ ಮಾಫಿಯಾ ಜೊತೆ ಶಾಮೀಲಾಗಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯದಿಂದ ಮಾರುಕಟ್ಟೆಯಲ್ಲಿ ಸುಮಾರು 40 ನಕಲಿ ಔಷಧಿಗಳು ಪತ್ತೆಯಾಗಿದ್ದು, ಜನಸಾಮಾನ್ಯರ ಪ್ರಾಣವನ್ನ ಅಪಾಯಕ್ಕೆ ದೂಡಿದೆ.

ಸ್ವಾಮಿ ಸಿದ್ದರಾಮಯ್ಯನವರೇ, ಹೆಣ್ಣು ಮಕ್ಕಳ ಭ್ರೂಣ ಹತ್ಯೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಗಳಿಂದ ಬಾಣಂತಿಯರ ಸರಣಿ ಸಾವು, ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ, ಈ ರೀತಿ ಎಡವಟ್ಟುಗಳ ಮೇಲೆ ಎಡವಟ್ಟುಗಳು ಮಾಡುತ್ತಿರುವ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿದೆ. ನಿಮ್ಮ ಸರ್ಕಾರದ ದುರಾಡಳಿತಕ್ಕೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ್ದಾರೆ.