ಉತ್ತರ ಕನ್ನಡ: ಅಬಕಾರಿ ಎಸ್ಐ ಹೃದಯಾಘಾತದಿಂದ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಅಂಕೋಲಾದಲ್ಲಿ ಈ ಘಟನೆ ನಡೆದಿದ್ದು, ಅಕೋಲಾದ ಅಬಕಾರಿ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುರುಷೋತ್ತಮ ಹಳದನ್ ಕರ್(59) ಎಂಬುವರೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಅಧಿಕಾರಿಯಾಗಿದ್ದಾರೆ.
ಇಂದು ತಮ್ಮ ಮನೆಯಲ್ಲಿ ಬಾತ್ ರೂಮ್ಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಎಷ್ಟು ಹೊತ್ತಾದರೂ ಬಾತ್ ರೂಮ್ನಿಂದ ಬಾರದ ಕಾರಣ ಮನೆಯವರು ಹೋಗಿ ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಪುರುಷೋತ್ತಮ್ ಕಂಡು ಬಂದಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪುರುಷೋತ್ತಮ್ ಅವರನ್ನು ಪರೀಕ್ಷಿಸಿದಂತಹ ವೈದ್ಯರು ಆಸ್ಪತ್ರೆಗೆ ಬರುವ ಮೊದಲೇ ಪುರುಷೋತ್ತಮ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.