SK Home Ad
Home ತಾಜಾ ಸುದ್ದಿ ‘ಉಡುಗೊರೆ’ ಕೊಟ್ಟು ಬೊಕ್ಕಸ ಲೂಟಿ

‘ಉಡುಗೊರೆ’ ಕೊಟ್ಟು ಬೊಕ್ಕಸ ಲೂಟಿ

0
164

ಸಮಿತಿ ಅಂದರೆ ಕಾರ್ಯಕರ್ತರ ಉದ್ಯೋಗ ಖಾತ್ರಿಗಾಗಿ ರೂಪಿಸಿರುವ ನರೇಗಾ ಯೋಜನೆನಾ?

ಬೆಂಗಳೂರು: ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು, ಸದಸ್ಯರ ಗೌರವಧನ ನೆಪದಲ್ಲಿ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಅತ್ಯಾಪ್ತ ಕಾರ್ಯಕರ್ತರಿಗೆ ಒಟ್ಟು 18.75 ಕೋಟಿ ರೂಪಾಯಿ ‘ಉಡುಗೊರೆ’ ಕೊಟ್ಟು ರಾಜ್ಯದ ಬೊಕ್ಕಸವನ್ನ ಲೂಟಿ ಮಾಡುತ್ತಿದೆ ಭ್ರಷ್ಟ
ಕರ್ನಾಟಕ ಕಾಂಗೆಸ್‌ ಸರ್ಕಾರ ಎಂದು ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ ಅವರೇ, ಸರ್ಕಾರದ ಬೊಕ್ಕದ ಹಣವನ್ನ ನಿಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಗೌರವಧನ ಕೊಡಲು ಬಳಸುತ್ತಿದ್ದೀರಲ್ಲ, ಕನ್ನಡಿಗರ ತೆರಿಗೆ ಹಣ ಏನು ನಿಮ್ಮ ಕೆಪಿಸಿಸಿ ಆಸ್ತಿನಾ?

ಇಷ್ಟಕ್ಕೂ ಈ ಗ್ಯಾರೆಂಟಿ ಅನುಷ್ಠಾನ ಸಮಿತಿಗಳು ಯಾಕೆ ಬೇಕು? ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲು ಆಯಾ ಇಲಾಖೆಯಲ್ಲಿ ಅಧಿಕಾರಿಗಳಿಲ್ಲವೇ, ಸರ್ಕಾರಿ ಸಿಬ್ಬಂದಿಗಳಿಲ್ಲವೇ? ಅಥವಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಂದರೆ ಕಾಂಗ್ರೆಸ್ ಕಾರ್ಯಕರ್ತರ ಉದ್ಯೋಗ ಖಾತ್ರಿಗಾಗಿ ರೂಪಿಸಿರುವ ನರೇಗಾ ಯೋಜನೆನಾ?

ಕರ್ನಾಟಕದ ಜನತೆಯ ಬೆವರಿನ ತೆರಿಗೆ ಹಣವನ್ನ ಈ ರೀತಿ ಪೋಲು ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡಿಗರು ತಕ್ಕ ಪಾಠ ಕಲಿಸುವ ದಿನ ಬಹಳ ದೂರವಿಲ್ಲ ಎಂದಿದ್ದಾರೆ.