Home Advertisement
Home ತಾಜಾ ಸುದ್ದಿ ಯತ್ನಾಳ ಏಕಾಂಗಿಯಲ್ಲ: ನಾಳೆ ಬೆಂಗಳೂರಲ್ಲಿ ಭಿನ್ನಮತೀಯರ ಸಭೆ

ಯತ್ನಾಳ ಏಕಾಂಗಿಯಲ್ಲ: ನಾಳೆ ಬೆಂಗಳೂರಲ್ಲಿ ಭಿನ್ನಮತೀಯರ ಸಭೆ

0
113

ನೋಟೀಸ್ ಕೊಟ್ಟಾಗಲೇ ಅದರ ವಾಸನೆ ಬಡಿದಿತ್ತು

ಬೆಳಗಾವಿ: ಬಸನಗೌಡ ಪಾಟೀಲ್‌ ಯತ್ನಾಳ್‌ ಒಬ್ಬಂಟಿಯಾಗಿಲ್ಲ. ನಾವೆಲ್ಲರೂ ಅವರ ಜೊತೆಗಿದ್ದೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ನಿನ್ನೆಯೇ ಪಕ್ಷದ ರಾಷ್ಟ್ರೀಯ ನಾಯಕರ ಜೊತೆ ಮಾತನಾಡಿದ್ದೇನೆ. ಯತ್ನಾಳ ಅವರಿಗೆ ಪಕ್ಷದ ಶಿಸ್ತು ಸಮಿತಿ ನೋಟೀಸ್ ಕೊಟ್ಟಾಗಲೇ ಅದರ ವಾಸನೆ ಬಡಿದಿತ್ತು. ಯತ್ನಾಳ ಅವರು ಬಹು ದೊಡ್ಡ ಸಮುದಾಯದ ನಾಯಕರು. ಪಕ್ಷಕ್ಕಾಗಿ ಬಹಳ ದುಡಿದಿದ್ದಾರೆ. ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬಾರದಿತ್ತು. ಇದರಿಂದ ಮನಸ್ಸಿಗೆ ನೋವಾಗಿದೆ, ಉಚ್ಚಾಟನೆ ಆದೇಶ ಹಿಂದೆ ಪಡೆಯುವಂತೆ ಮನವಿ ಮಾಡಿರುವೆ. ಈ ಸಂಬಂಧ ಎಲ್ಲ ಭಿನ್ನಮತೀಯರು ಬೆಂಗಳೂರಿನಲ್ಲಿ ಸಭೆ ಸೇರಲು ನಿರ್ಧರಿಸಿದ್ದೇವೆ, ಎಲ್ಲರೂ ಬಿಜೆಪಿಯಲ್ಲೇ ಇರುತ್ತೇವೆ. ನಾಳೆ ಯತ್ನಾಳ ಬೆಂಗಳೂರಿಗೆ ಬರುತ್ತಿದ್ದಾರೆ. ನಾವೆಲ್ಲರೂ ಅಲ್ಲಿ ಸಭೆ ನಡೆಸಿ ಚರ್ಚೆ ಮಾಡಲಿದ್ದೇವೆ. ಸಭೆಯ ನಂತರ ಯತ್ನಾಳ ಅವರಿಂದ ಪಕ್ಷದ ವರಿಷ್ಠರಿಗೆ ಪತ್ರ ಬರೆಸುತ್ತೇವೆ. ಉಚ್ಚಾಟನೆ ಆದೇಶ ಪುನರ್ ಪರಿಶೀಲಿಸುವಂತೆ ಮನವಿ. ಮಾಡುತ್ತೇವೆ ಎಂದರು.