ಬೆಂಗಳೂರು: ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮ್ಸುಂದರ್ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.
ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ಯಾಮ್ಸುಂದರ್ ಅವರನ್ನು ವಿದ್ಯಾಪೀಠ ಸರ್ಕಲ್ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಶ್ಯಾಮ್ಸುಂದರ್ ಅವರು ಎದ್ದೇಳು ಮಂಜುನಾಥ ಸಿನಿಮಾದಲ್ಲಿ ಬ್ಯಾಂಕ್ ಮ್ಯಾನೇಜರ್ ಪಾತ್ರವನ್ನೂ ನಿರ್ವಹಿಸಿ, ಭಾರಿ ಫೇಮಸ್ ಆಗಿದ್ದರು. ಪತ್ರಕರ್ತರ ಬಳಗದಲ್ಲಿ ಶಾಮಿ ಎಂದೇ ಪ್ರಸಿದ್ಧಿ ಪಡೆದಿದ್ದ ಅವರು ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿದ್ದ ಅವರು. ಬಳಿಕ ಡಿಜಿಟಲ್ ಮಾಧ್ಯಮ ಪ್ರವೇಶ ಮಾಡಿದ್ದರು.